ಸ್ವ್ಯಾಬ್ ಸದಸ್ಯರಿಗೆ ಐಡಿ ಕಾರ್ಡ್



"ಸ್ವ್ಯಾಬ್" ಸದಸ್ಯರಿಗೆ ಮೊಟ್ಟ ಮೊದಲ ಬಾರಿಗೆ ನೀಡಲಾಗಿರುವ "ಐಡಿ ಕಾರ್ಡ್" ಹಾಗೂ "ಕಾರ್ಡ್ ಹೋಲ್ಡರ್ ಪೌಚ್". ಕಾರ್ಡ್ ಗಳನ್ನು ಸದಸ್ಯರು ನೀಡಿದ ವಾರ್ಷಿಕ ಶುಲ್ಕದಲ್ಲಿ ಮಾಡಿಸಲಾಗಿದ್ದು; ಕಾರ್ಡ್ ಹೋಲ್ಡರ್ ಪೌಚ್ ಗಳನ್ನು "ಯಾಮಿನಿ ಇ-ಮ್ಯಾಗಜೀನ್" ಸಹ ಸಂಪಾದಕರಾಗಿರುವ ಪ್ರೇಮಾ ಡೇವಿಡ್ ಅವರು "ಸ್ವ್ಯಾಬ್" ಸದಸ್ಯರಿಗೆ ಉಡುಗೊರೆಯಾಗಿ ನೀಡಿದ್ದಾರೆ.

ಇಪ್ಪತ್ತೆಂಟು ವರ್ಷಗಳ ಬಳಿಕ "ಬ್ಲೂ ಪಡೆ" ಗೆಲ್ಲಬಹುದೇ ವಿಶ್ವಕಪ್?

ಶಂಶೀರ್, ಬುಡೋಳಿ

19ರಿಂದ ಎಪ್ರಿಲ್ 2 ರವರೆಗೆ ಭಾರತ, ಬಾಂಗ್ಲಾದೇಶ ಹಾಗೂ ಶ್ರೀಲಂಕಾ ದೇಶಗಳ ಅತಿಥೇಯತ್ವದಲ್ಲಿ ನಡೆಯಲಿರುವ ವಿಶ್ವಕಪ್ ಕ್ರಿಕೆಟ್ಗಾಗಿ 15 ಮಂದಿ ಸದಸ್ಯರ ಭರತ ತಂಡವನ್ನು ಪ್ರಕಟಿಸಿದ ದಿನ. ಸಮತೋಲನ ರೀತಿಯಲ್ಲಿ ವಿಶ್ವಕಪ್ಗಾಗಿ ತಂಡವನ್ನು ಆಯ್ಕೆ ಮಾಡಿರುವ ರಾಷ್ಟ್ರೀಯ ಆಯ್ಕೆ ಸಮಿತಿಯ ಅಧ್ಯಕ್ಷ ಕೃಷ್ಣಮಾಚಾರಿ ಶ್ರೀಕಾಂತ್ ಜೊತೆಗೆ ಯಶ್ಪಾಲ್ ಶರ್ಮಾ, ಸುರೇಂದ್ರ ಭವೆ, ನರೇಂದ್ರ ಹಿರ್ವಾನಿ ಹಾಗೂ ರಾಜಾ ವೆಂಕಟ್ ಸಮಿತಿಯು ಇಪ್ಪತ್ತೆಂಟು ವರ್ಷಗಳ ಬಳಿಕ ಭರತ ತಂಡ ವಿಶ್ವಕಪ್ ಗೆಲ್ಲಬೇಕೆಂಬ ನೆಲೆಯಲ್ಲಿ ತಂಡವನ್ನು ಪ್ರಕಟಿಸಿದಂತಿದೆ.

ಧೋನಿ ನೇತೃತ್ವದ ಭರತೀಯ ತಂಡ ಫೇವರೀಟ್ ತಂಡಗಳಲ್ಲೊಂದು ಎಂಬುದು ಸಂಶಯವಿಲ್ಲ. ಟೆಸ್ಟ್ ಅಗ್ರಸ್ಥಾನಿ ಹಾಗೂ ಏಕದಿನ ರ್ಯಾಂಕಿಂಗ್ನಲ್ಲಿ ದ್ವಿತೀಯ ಸ್ಥಾನದಲ್ಲಿರುವ ಭರತ ಕ್ರಿಕೆಟ್ ತಂಡ 2011ರ ವಿಶ್ವಕಪ್ ಕ್ರಿಕೆಟ್ನಲ್ಲಿ ವಿಶ್ವಕಪ್ ಗೆಲ್ಲುವುದು ಅನಿವಾರ್ಯವೆಂದು ಗುರಿ ಇಟ್ಟುಕೊಂಡರೆ ಫೈನಲ್ ಹಾದಿಗೇರಬಹುದು. ತಂಡದ ಆಯ್ಕೆ ಸಮತೋಲನವಾಗಿದೆ. ಈ ಜೊತೆಗೆ ಆಸ್ಟ್ರೇಲಿಯ, ದಕ್ಷಿಣ ಆಫ್ರಿಕಾ, ನ್ಯೂಝಿಲೆಂಡ್ ವಿರುದ್ಧ ಯಾವ ರೀತಿಯ ಪ್ರದರ್ಶನ ನೀಡುತ್ತದೆಯೆಂಬುದು ಕೌತುಕವಾಗಿದೆ. ಯಾಕೆಂದರೆ ಇವರೆಗೆ ತವರಿನಲ್ಲಿ ನಡೆದ ಸರಣಿ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡುವ ಭರತ, ಈ ಬಾರಿಯ ವಿಶ್ವಕಪ್, ತವರಿನಲ್ಲಿ ನಡೆಯುವುದರಿಂದ್ದ ವಿಶ್ವಕಪ್ ಜಯಿಸುವ ಫೇವರೀಟ್ ತಂಡಗಳಲ್ಲೊಂದಾಗಿದೆ. ಗ್ರೂಪ್ ಬಿಯಲ್ಲಿ ಸ್ಥಾನ ಪಡೆದಿರುವ ಭರತದ ಫೈನಲ್ ಹಾದಿ ಸುಗಮವಾಗಿದೆ ಎಂದು ಹೇಳಬಹುದು. ಯಾಕೆಂದರೆ ಗ್ರೂಪ್ ಬಿಯಲ್ಲಿ ಭರತದ ಜೊತೆಗೆ ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ವೆಸ್ಟ್ಇಂಡೀಸ್, ಬಾಂಗ್ಲಾದೇಶ, ಐರ್ಲೆಂಡ್ ಹಾಗೂ ಹಾಲೆಂಡ್ ತಂಡಗಳು ಸ್ಥಾನ ಪಡೆದಿವೆ.

ಈಗಾಗಲೇ ವಿಶ್ವಕಪ್ ಮುನ್ನ ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ವೆಸ್ಟ್ಇಂಡೀಸ್ ತಂಡಗಳ ವಿರುದ್ಧ ಸರಣಿಯಾಡಿರುವ ಭರತಕ್ಕೆ ಯಾವ ರೀತಿ ಈ ಎದುರಾಳಿ ತಂಡಗಳನ್ನು ಎದುರಿಸಬೇಕೆಂಬ ತಂತ್ರಗಾರಿಕೆ ಗೊತ್ತಿರಬಹುದು. ಸ್ಪಲ್ಪ ಮಟ್ಟಿಗೆ ದಕ್ಷಿಣ ಆಫ್ರಿಕಾ, ಇಂಡೀಸ್ ಹಾಗೂ ಇಂಗ್ಲೆಂಡ್ ತಂಡದ ವಿರುದ್ಧ ಪ್ರಬಲ ಸ್ಪಧರ್ೆ ಎದುರಿಸುವ ಸಾಧ್ಯತೆಯಿದೆ. ಹೀಗಾಗಿ ಧೋನಿ ಪಡೆ ಇದನ್ನು ಎದುರಿಸಲು ಸಿದ್ದತೆ ನಡೆಸಬೇಕು. ತವರಿನಲ್ಲಿ ನಡೆಯುವ ಪಂದ್ಯವೆಂದು ಅತೀ ಉತ್ಸಾಹ ತಂಡಕ್ಕೆ ಮಾರಕವಾಗಬಹುದು. ವಿಶ್ವದ ಜನತೆಯನ್ನು ತುದಿಗಾಲಲ್ಲಿ ನಿಲ್ಲಿಸಿರುವ ಈ ವಿಶ್ವಕಪ್ ಕ್ರಿಕೆಟ್ ಏಷ್ಯಾ ಖಂಡದಲ್ಲಿ ನಡೆಯುತ್ತಿರುವುದು ವಿಶೇಷವಾಗಿದೆ. ಭರತಕ್ಕೆ ಮತ್ತೊಮ್ಮೆ ಎರಡನೆ ಸಲ ತವರಿನಲ್ಲಿ ವಿಶ್ವಕಪ್ ಗೆಲ್ಲುವ ಅಪೂರ್ವ ಅವಕಾಶ ಬಂದಿದೆ ಎನ್ನಬಹುದು. ಕೃಷ್ಣಮಾಚಾರಿ ಶ್ರೀಕಾಂತ್ ನೇತೃತ್ವದ ಆಯ್ಕೆ ಸಮಿತಿಗೂ ವಿಶ್ವಕಪ್ ಗೆಲ್ಲುವ ತಂಡದ ಆಯ್ಕೆ ಮಾಡುವುದು ಬಹಳ ಸವಾಲಾಗಿಬಿಟ್ಟಿತ್ತಂತೆ. ಹಾಗಾದರೆ ಧೋನಿ ನಾಯಕತ್ವದ ತಂಡದ ಮೇಲೆ ಎಷ್ಟು ಒತ್ತಡ ಇರಲಿಕ್ಕಿಲ್ಲ? ಹಾಗೂ ಎಷ್ಟೊಂದು ನಿರೀಕ್ಷೆಗಳಿರಲಿಕ್ಕಿಲ್ಲ? ಏಷ್ಯಾ ಖಂಡದಲ್ಲಿ ನಡೆಯುವ ವಿಶ್ವಕಪ್ಅನ್ನು ಭರತ ಒಂದು ವೇಳೆ ಗೆಲ್ಲಲು ಸಾಧ್ಯವಾಗದಿದ್ದರೆ, ಕನಿಷ್ಠ ಪಕ್ಷ ಶ್ರೀಲಂಕಾ , ಬಾಂಗ್ಲಾದೇಶ ಅಥವಾ ಪಾಕಿಸ್ತಾನ ಗೆದ್ದರೆ ಸ್ಪಲ್ಪಮಟ್ಟಿಗೆ ತೃಪ್ತಿ ಪಡಬಹುದು. ಭದ್ರತಾ ಕಾರಣದಿಂದಾಗಿ ಪಾಕಿಸ್ತಾನದಲ್ಲಿ ವಿಶ್ವಕಪ್ ಪಂದ್ಯ ನಡೆಸಲು ಹಿಂದೇಟು ಹಾಕಲಾಗಿದೆ.

ಕಪಿಲ್ ದೇವ್ ನಾಯಕತ್ವದ ತಂಡ , ಮಾಡಿದ ಸಾಧನೆ 2011ರಲ್ಲಿ ಧೋನಿ ಪಡೆ ಮಾಡಿದರೆ ಅದು ಧೋನಿ, ತನ್ನ ನಾಯಕತ್ವದಲ್ಲಿ ಮಾಡುವ ಅತಿ ದೊಡ್ಡ ಸಾಧನೆಯಾಗಲಿದೆ. ಹೀಗಾಗಿ ಧೋನಿ ನಾಯಕತ್ವದ ಮೇಲೆ ಆಯ್ಕೆ ಸಮಿತಿಯ ಜೊತೆಗೆ ದೇಶದ ಜನತೆಯೆ ಬಹಳ ನಿರೀಕ್ಷೆಯನ್ನಿಟ್ಟುಕೊಂಡಿದೆ. ಆರು ಬ್ಯಾಟ್ಸ್ಮನ್, ನಾಲ್ಕು ವೇಗದ ಬೌಲರ್ಗಳು, ಮೂರು ಸ್ಪಿನ್ನರ್ಗಳು, ಒಂದು ಆಲ್ರೌಂಡರ್ ಹಾಗೂ ಒಂದು ವಿಕೆಟ್ ಕೀಪರ್ಗಳನ್ನೊಳಗೊಂಡ ಭರತ ಕ್ರಿಕೆಟ್ ತಂಡಕ್ಕೆ ಒಂದು ವೇಳೆ ವಿಶ್ವಕಪ್ ಪಂದ್ಯದ ವೇಳೆ ಯಾರಾದರೂ ಗಾಯಾಗೊಂಡರೆ ಅದು ತಂಡಕ್ಕೆ ಹಿನ್ನೆಡೆಯಾಗುವ ಸಾಧ್ಯತೆಯಿದೆ. ಹೀಗಾಗಲೇ ಗಾಯಾಗೊಂಡಿರುವ ಸಚಿನ್ ತೆಂಡುಲ್ಕರ್, ಗೌತಮ್ ಗಾಂಭೀರ್, ಪ್ರವೀಣ್ ಕುಮಾರ್ ವಿಶ್ವಕಪ್ ಪಂದ್ಯದ ವೇಳೆ ಚೇತರಿಸಿಕೊಳ್ಳುತ್ತಾರೆಂಬ ನಿರೀಕ್ಷೆಯಿದೆ. ಒಂದು ವೇಳೆ ಇವರು ಫಿಟ್ನೆಸ್ ಮತ್ತು ಫಾಮರ್್ಅನ್ನು ಉತ್ತಮಪಡಿಸಲು ಸಾಧ್ಯವಾಗದಿದ್ದರೆ, ಆಯ್ಕೆ ಸಮಿತಿಯು ಬದಲಿ ಆಟಗಾರರನ್ನು ಆಯ್ಕೆ ಮಾಡುವ ಸಾಧ್ಯತೆ ಕೂಡಾ ಇರಬಹುದು. ಬಹಳ ನಿರೀಕ್ಷೆ ಮೂಡಿಸಿದ್ದ ಶಾಂತಕುಮಾರನ್ ಶ್ರೀಶಾಂತ್, ಪ್ರಗ್ಯಾನ್ ಓಝಾ, ರೋಹಿತ್ ಶಮರ್ಾ ಹಾಗೂ ಪಾಥರ್ಿವ್ ಪಟೇಲ್ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ವಿಫಲರಾಗಿದ್ದಾರೆ. ಮಾತ್ರವಲ್ಲ, ತಂಡದಲ್ಲಿ ಧೋನಿ ಜೊತೆಗೆ ಇತರ ವಿಕೆಟ್ ಕೀಪರ್ಗಳಾದ ಅಜೆಂಕ್ಯಾ ರಹಾನೆ, ಪಾರ್ಥೀವ್ ಪಟೇಲ್ರನ್ನು ಸೇರಿಸಿಕೊಳ್ಳುವ ಚರ್ಚೆ ನಡೆಯುತ್ತಿತ್ತು. ಆದರೆ ಕೊನೆಗೆ ಧೋನಿಯನ್ನು ತಂಡದ ಏಕೈಕ ವಿಕೆಟ್ ಕೀಪರ್ಆಗಿ ಉಳಿಸಿಕೊಳ್ಳಲಾಗಿದೆ. ಸಚಿನ್ ತೆಂಡುಲ್ಕರ್ಗೆ ಒಂದು ವೇಳೆ ಇದು ಕೊನೆಯ ವಿಶ್ವಕಪ್ ಆಗುವ ಸಾಧ್ಯತೆಯಿದೆ. ದಕ್ಷಿಣ ಆಫ್ರಿಕಾದ ಗ್ರೇಮ್ ಸ್ಮಿತ್ ಹಾಗೂ ಜಾಕ್ ಕಾಲಿಸ್ಗೆ ಇದು ಕೊನೆಯ ವಿಶ್ವಕಪ್ ಎನ್ನಲಾಗುತ್ತಿದೆ. ಭರತ ತಂಡ ಮಾತ್ರ ಅಲ್ಲ ಗಾಯಾಳುಗಳ ಸಮಸ್ಯೆ ಎದುರಿಸುತ್ತಿದೆ. ಬದಲು ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯ, ಶ್ರೀಲಂಕಾ, ನ್ಯೂಝಿಲೆಂಡ್ ತಂಡಗಳು ಸಹ ಗಾಯಾಳುಗಳ ಸಮಸ್ಯೆ ಎದುರಿಸುತ್ತಿದೆ.

ಭರತದ ಬೌಲಿಂಗ್ ನೇತೃತ್ವ ವಹಿಸಿರುವ ಝಹೀರ್ ಖಾನ್ರ ಮೇಲೆ ಭರೀ ನಿರೀಕ್ಷೆಯಿಡಲಾಗಿದೆ. ಇವರ ಜೊತೆಗೆ ಆಶೀಶ್ ನೆಹ್ರಾ, ಮುನಾಫ್ ಪಟೇಲ್, ರವಿಚಂದ್ರನ್ ಅಶ್ವಿನ್ ಸಾಥ್ ನೀಡಲಿದ್ದಾರೆ. ಸ್ಪಿನ್ ವಿಭಗದ ಹರ್ಭಜನ್ ಸಿಂಗ್ರ ಜೊತೆಗೆ ಪಿಯೂಸ್ ಚಾವ್ಲಾ ಕೂಡಾ ಯಾವ ರೀತಿಯ ಪ್ರದರ್ಶನ ನೀಡಬಲ್ಲುರು ಎಂಬುದು ಕೌತುಕವಾಗಿದೆ. ಹದಿನೈದು ಮಂದಿಯಲ್ಲಿ ಯಾರನ್ನು ಆಡುವ ಬಳಗದಲ್ಲಿ ಆಯ್ಕೆ ಮಾಡಲಾಗುತ್ತದೆ ಎಂಬುದರ ಮೇಲೆ ಕೂಡಾ ಬಹಳ ನಿರೀಕ್ಷೆಯಿಡಲಾಗಿದೆ. ತಂಡದ ಆಯ್ಕೆ ಸಮರ್ಥವಾಗಿದೆಯೊ ಅಥವಾ ಆಗಿಲ್ಲವೆಂಬುದು ಮುಖ್ಯವಲ್ಲ. ಬದಲು ಆಯ್ಕೆಗೊಂಡಿರುವ ಆಟಗಾರರು ವಿಶ್ವಕಪ್ ಪಂದ್ಯದಲ್ಲಿ ಯಾವ ರೀತಿಯ ಪ್ರದರ್ಶನ ನೀಡುತ್ತಾರೆ ಎಂಬುದು ಮುಖ್ಯ ಇದರ ಮೇಲೆ ತಂಡದ ಭವಿಷ್ಯ ನಿಂತಿದೆ. ಎಲ್ಲಾ ಆಟಗಾರರು ಸಮರ್ಥರೆ. ಹೀಗಾಗಿ ಆಟಗಾರರ ಆಟದ ಸಾಮಥ್ರ್ಯದ ಬಗ್ಗೆ ಚರ್ಚೆ ಮಾಡುವುದು ಒಳಿತಲ್ಲ.

ಚೊಚ್ಚಲ ವಿಶ್ವಕಪ್ಗೆ ಆಯ್ಕೆಗೊಂಡಿರುವ ಆರ್.ಅಶ್ವಿನ್ ಹಾಗೂ ಪಿಯೂಸ್ ಚಾವ್ಲಾರಿಗೆ ಆಡುವ ಅವಕಾಶ ನೀಡಿದರೆ ಇದನ್ನು ಇವರು ಸಮರ್ಥವಾಗಿ ಬಳಸಿಕೊಂಡರೆ ಇದು ಇವರಿಬ್ಬರ ಮುಂದಿನ ಭವಿಷ್ಯವನ್ನು ನಿರ್ಧರಿಸಬಲ್ಲುದು. ಬಾಯಿಗೆ ಬಂದ ತುತ್ತನ್ನು ಕಳೆದುಕೊಳ್ಳಬಾರದು ಎಂಬ ಮಾತು ಈ ಆಟಗಾರರಿಗೆ ಹಾಗೂ ಭರತ ತಂಡಕ್ಕೆ ಅನ್ವಯಿಸುತ್ತದೆ. 1983ರ ವಿಶ್ವಕಪ್ ಗೆದ್ದ ಸಂಭ್ರಮವನ್ನೇ ಈಗಲೂ ಸವಿಯುತ್ತಿರುವ ಭರತೀಯರಿಗೆ ಈಗ ಹೊಸ ವಿಶ್ವಕಪ್ ಗೆದ್ದ ಸವಿ ಸವಿಯುವ ಆಶೆ ಮೂಡಿದೆ. ಹೀಗಾಗಿ ಧೋನಿ ನೇತೃತ್ವದ ತಂಡ ಫೈನಲ್ ಗಾದಿ ಏರುವವರೆಗೆ ಪ್ರಬಲ ಹಾಗೂ ಸಾಮಾನ್ಯ ಸ್ಪಧರ್ೆಯನ್ನು ಸಮರ್ಥವಾಗಿ ನಿಭಯಿಸಬೇಕು. ಒಂದು ದೃಷ್ಟಿಯಲ್ಲಿ ನೋಡುವುದಾದರೆ ಭರತಕ್ಕೆ ವಿಶ್ವಕಪ್ ಗೆಲ್ಲುವುದು ಕಷ್ಟದ ಸಂಗತಿಯೇನಲ್ಲ.

ಸಮರ್ಥ ಆಟಗಾರರು ಇದ್ದ ಮೇಲೆ ಭರತ ಏನೂ ಚಿಂತೆ ಮಾಡಬೇಕಿಲ್ಲ. ದಕ್ಷಿಣ ಆಫ್ರಿಕಾ ವಿರುದ್ಧದ ದ್ವಿತೀಯ ಹಾಗೂ ತೃತೀಯ ಏಕದಿನ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿ ತನ್ನ ಆಯ್ಕೆಯನ್ನು ಸಮಥರ್ಿಸಿಕೊಂಡಿರುವ ಸ್ಫೋಟಕ ಬ್ಯಾಟ್ಸ್ಮನ್ ಯೂಸುಫ್ ಪಠಾಣ್ ಮೇಲೆ ಹಾಗೂ ಯುವರಾಜ್ ಸಿಂಗ್, ಮುನಾಫ್ ಪಟೇಲ್, ಝಹೀರ್ ಖಾನ್, ನೆಹ್ರಾ ಹಾಗೂ ಐಪಿಎಲ್ನ ದುಬಾರಿ ಆಟಗಾರ ಗೌತಮ್ ಗಾಂಭೀರ್ ಮೇಲೆ ಭರೀ ನಿರೀಕ್ಷೆಯಿಡಲಾಗಿದೆ. ಒಂದು ವೇಳೆ ವಿಶ್ವಕಪ್ ಗೆಲ್ಲುವುದಕ್ಕಿಂತ ಮುಂಚೆ ತಂಡದ ಪ್ರದರ್ಶನ ಬಹಳ ಮುಖ್ಯವಾಗುತ್ತದೆ. ವಿವಿಧ ದೇಶಗಳ ಕ್ರಿಕೆಟ್ ತಂಡಗಳು ಭಗವಹಿಸುತ್ತಿರುವುದರಿಂದ್ದ ಟೀಮ್ ಇಂಡಿಯಾ ವಿಶ್ವಕಪ್ ಪಂದ್ಯದಲ್ಲಿ ಸಂಘಟಿತ ಹೋರಾಟ ಪ್ರದರ್ಶಿಸಬೇಕು. ಹೀಗಾದಲ್ಲಿ ಮಾತ್ರ ಪಂದ್ಯದುದ್ದಕ್ಕೂ ಉತ್ತಮ ಪ್ರದರ್ಶನ ನೀಡಬಹುದು. ಆರಂಭಿಕ ಬ್ಯಾಟ್ಸ್ಮನ್ಗಳ ವಿಕೆಟ್ ಬೇಗನೆ ಪತನಗೊಂಡರೆ ಮತ್ತೆ ತಂಡದ ಬಲ ಹೀನವಾದಂತೆ ಇತರ ಆಟಗಾರರ ವಿಕೆಟ್ ಉರುಳುವುದು ಬ್ಲೂ ತಂಡದ ಒಂದು ಮೈನಸ್ ಪಾಯಿಂಟ್. ಇದು ವಿಶ್ವಕಪ್ನಲ್ಲಿ ಪುನರಾವರ್ತನೆಯಾಗಬಾರದು. ವಿಶ್ವಕಪ್ ಪಂದ್ಯದ ಸಮಯದಲ್ಲಿ ಜಯವೊಂದೆ ತಮ್ಮ ಗುರಿ ಎಂಬ ಭವನೆ ಟೀಮ್ ಇಂಡಿಯಾದಲ್ಲಿದ್ದರೆ ಧೋನಿ ಪಡೆಗೆ ಯಾವ ತಂಡಗಳು ಪ್ರಬಲವಾಗಿ ತೋರಲಾರವು. ಏನೇ ಚಚರ್ೆಗಳಿದ್ದರೂ, ಯಾರು, ಯಾವಾಗ ಸೋಲುತ್ತಾರೆ, ಗೆಲ್ಲುತ್ತಾರೆ ಎಂಬುದಕ್ಕೆ ವಿಶ್ವಕಪ್ ಆರಂಭವಾಗುವವರೆಗೆ ಕಾಯಬೇಕು. ಧೋನಿ ಪಡೆಯಂತೂ ವಿಶ್ವಕಪ್ ಗೆಲ್ಲುವ ಗುರಿಯಲ್ಲಿದೆ. ಗುಡ್ಲಕ್ ಟೀಮ್ ಇಂಡಿಯಾ.

chammu99@gmail.

"ಸಿಟಿಜನ್ ಜರ್ನಲಿಸ್ಟ್" ...ಎಂ. ಎ. ಪೊನ್ನಪ್ಪ ಭಾಷಣ

ಬೆಂಗಳೂರು ಕ್ರೀಡಾ ಬರಹಗಾರರ ಸಂಘದ ಮಾಜಿ ಅಧ್ಯಕ್ಷರೂ ಆಗಿರುವ ಬೆಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಹಾಗೂ "ಪ್ರಜಾವಾಣಿ" ಕ್ರೀಡಾ ಸಂಪಾದಕರಾದ ಶ್ರೀ ಎಂ.ಎ. ಪೊನ್ನಪ್ಪ ಅವರು ಜನವರಿ 21, 2011 (ಶುಕ್ರವಾರ) ರಂದು ಬೆಂಗಳೂರಿನ ಸೇಂಟ್ ಜೋಸೆಫ್ಸ್ ಕಾಲೇಜ್ ಆಫ್ ಕಾಮರ್ಸ್ ಸಭಾಭವನದಲ್ಲಿ ಬೆಂಗಳೂರು ಪ್ರೆಸ್ ಕ್ಲಬ್ ಮತ್ತು ಸೇಂಟ್ ಜೋಸೆಫ್ಸ್ ಕಾಲೇಜ್ ಆಫ್ ಕಾಮರ್ಸ್ ಸಹಯೋಗದಲ್ಲಿ ನಡೆದ "ಸಿಟಿಜನ್ ಜರ್ನಲಿಸಮ್ ಪ್ರೋಗ್ರಾಮ್" ಕಾರ್ಯಕ್ರಮದಲ್ಲಿ ಭಾಷಣ ನೀಡಿದರು. ಅದರ ಪೂರ್ಣ ಪಾಠವನ್ನು ಇಲ್ಲಿ ಕ್ರೀಡಾ ಪತ್ರಕರ್ತ ಮಿತ್ರರ ಓದಿಗಾಗಿ ಪ್ರಕಟಿಸಲಾಗಿದೆ.


"ಸಿಟಿಜನ್ ಜರ್ನಲಿಸ್ಟ್"

ಭಾಷಣ: ಎಂ. ಎ. ಪೊನ್ನಪ್ಪ

"ಸಿಟಿಜನ್ ಜರ್ನಲಿಸ್ಟ್" ಇದು ಪತ್ರಿಕೋದ್ಯಮ ಹಾಗೂ ಸಮೂಹ ಮಾಧ್ಯಮಕ್ಕೆ ಹೊಸ ಆಯಾಮ ನೀಡಿದ ಹೊಸದೊಂದು ಪರಿಕಲ್ಪನೆ. ಇಂಥದೊಂದು ಹೊಸಪರಿಕಲ್ಪನೆಯ ಕುರಿತು ಪರಿಪೂರ್ಣವಾದ ಮಾಹಿತಿಯನ್ನು ಕಲ್ಪಿಸಿಕೊಡುವ ಉದ್ದೇಶದ ಈ ಕಾರ್ಯಾಗಾರದಲ್ಲಿ ಪಾಲ್ಗೊಂಡಿರುವ ತಮಗೆಲ್ಲ ನಮಸ್ಕಾರ.

"ಸಿಟಿಜನ್ ಜರ್ನಲಿಸ್ಟ್" ಎನ್ನುವ ಪದವೇ "ನಿಮ್ಮೊಳಗೂ ಒಬ್ಬ ಪತ್ರಕರ್ತನಿದ್ದಾನೆ" ಎಂದು ಪ್ರತಿಯೊಬ್ಬರಿಗೂ ತಿಲಿಸುವಂಥ ವಿಶೇಷವಾದ ಒಳ ಅರ್ಥವನ್ನು ಹೊಂದಿದೆ. ಎಲ್ಲರೂ ಪತ್ರಕರ್ತರಾಗಬಹುದು. ಆದರೆ ಪರಿಣತಿಯ ಅಂತರ ಇರಬಹುದು. ವೃತ್ತಿಪರ ಹಾಗೂ ನಾಗರಿಕ ಪತ್ರಕರ್ತರ ನಡುವೆ ಇರುವ ಅಂತರ ಮಾತ್ರ ಇಷ್ಟೇ ಆಗಿರುತ್ತದೆ. ಆದರೆ ನಾಗರಿಕ ಪತ್ರಕರ್ತರೂ ವೃತ್ತಿಪರರಂತೆ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಳ್ಳಲು ಖಂಡಿತ ಸಾಧ್ಯ ಅಂಥದೊಂದು ಸಾಧ್ಯತೆಗೆ ಅವಕಾಶ ಮಾಸಿಕೊತ್ತಿದ್ದೆ "ಸಿಟಿಜನ್ ಜರ್ನಲಿಸಂ" ಅಥವಾ "ಸಿಟಿಜನ್ ಜರ್ನಲಿಸ್ಟ್" ಎನ್ನುವ ಪರಿಕಲ್ಪನೆ.

"ಸಿಟಿಜನ್ ಜರ್ನಲಿಸ್ಟ್" ಎನ್ನುವ ಕಲ್ಪನೆ ಭಾರತೀಯ ಮಾಧ್ಯಮಕ್ಕೆ ಪರಿಚಯವಾಗಿ, ಅದರಲ್ಲಿ ಜನರೂ ತೊಡಗಿಕೊಂಡಿದ್ದು ಕಳೆದ ಒಂದೆರಡು ವರ್ಷಗಳಲ್ಲಿ. ಹೀಗಾಗುವುದಕ್ಕೆ ಕಾರಣ ದೃಶ್ಯಮಾಧ್ಯಮಗಳು ಹೆಚ್ಚು ಕ್ರಿಯಾಶೀಲವಾಗಿದ್ದು. ಆದರೆ ಆರ್ಥರ್ ಸಿ ಕ್ಲಾರ್ಕ್ ಹೇಳುವಂತೆ ಹ್ಯಾಮ್ ರೇಡಿಯೋ ಬಳಕೆದಾರ, ಅಂತರಜಾಲದಲ್ಲಿ ಅಭಿಪ್ರಾಯ ಹರಿಬಿಡುವ ಬ್ಲಾಗರ್, ಹಾಗೂ ಇಂದಿನ ಸಮೂಹ ಮಾಧ್ಯಮದ ಜೊತೆ ತಂತ್ರಜ್ಞಾನದ ಅರಿವಿನೊಂದಿಗೆ ಸಂಪರ್ಕ ಹೊಂದುವ ಪ್ರತಿಯೊಬ್ಬನೂ ಸಿಟಿಜನ್ ಜರ್ನಲಿಸ್ಟ್.

ಬ್ಲಾಗರ್, ಮೊಬೈಲ್ ಬಳಕೆದಾರ ಒಂದು ಘಟನೆಯನ್ನು ದಾಖಲಿಸಿ ಅದಕ್ಕೆ ಪ್ರತಿಯಾಗಿ ಅಭಿಪ್ರಾಯಗಳು ಹುಟ್ಟುವಂತೆ ಮಾಡಬಲ್ಲವನಾಗಿದ್ದಾನೆ ಎನ್ನುತ್ತಾರೆ
ಆರ್ಥರ್ ಸಿ ಕ್ಲಾರ್ಕ್. ಇತ್ತೀಚೆಗೆ ನಿಧನರಾದ ಆರ್ಥರ್ ಸಿ ಕ್ಲಾರ್ಕ್ ಖ್ಯಾತ ಲೇಖಕ, ಕಾದಂಬರಿಕಾರ. ಇವರು ಬರೆದ ವಿಜ್ಞಾನದ ಕಥೆಗಳು ಕೇವಲ ಕಲ್ಪನೆಯಷ್ಟೇ ಆಗದೆ ಅವರ ಕಣ್ಣಮುಂದೆ ಸಾಕಾರವಾದಂಥವು.

ಸಂಪರ್ಕ ಹಾಗೂ ಸಮೂಹ ಮಾಧ್ಯಮ ಕ್ಷೇತ್ರ ಕುರಿತು ಒಬ್ಬ ವಿಜ್ಞಾನಿಗಿಂತ ಹೆಚ್ಚಾಗಿ ಕನಸು ಕಂಡವರು
ಆರ್ಥರ್ ಸಿ ಕ್ಲಾರ್ಕ್. ಅದು ಸಾಕಾರವಾಗಿದ್ದನ್ನು ಕಣ್ಣಾರೆ ಕಂಡವರು. ಮಾಧ್ಯಮ ಕ್ಷೇತ್ರದ ಏಳುಬೀಳನ್ನು ಸೂಕ್ಷ್ಮವಾಗಿ ಗಮನಿಸಿದ್ದ ಆರ್ಥರ್ ಸಿ ಕ್ಲಾರ್ಕ್ ನಾಲ್ಕು ವರ್ಷಗಳ ಹಿಂದೆ ಪತ್ರಿಕೆಯೊಂದಕ್ಕೆ ಸಿಟಿಜನ್ ಜರ್ನಲಿಸ್ಟ್ ಕುರಿತು ಸುದೀರ್ಘ ಲೇಖನವನ್ನು ಬರೆದಿದ್ದರು. ಆ ಲೇಖನವು ಸಿಟಿಜನ್ ಜರ್ನಲಿಸ್ಟ್ ಎಂದರೇನು ಎನ್ನುವುದನ್ನು ತಿಳಿಸುತ್ತದೆ.

2004ರಲ್ಲಿ ಏಷ್ಯಾದಲ್ಲಿ ಆದ ಸುನಾಮಿ ವಿಶ್ವವನ್ನೇ ನಡುಗಿಸಿತು ಎಂದೇ ಬಣ್ಣಿಸಲಾಯಿತು. ಈ ಘಟನೆ ನಡೆದ ಸ್ಥಳಕ್ಕೆ ಸ್ವಲ್ಪ ಹತ್ತಿರದಲ್ಲೇ- ಶ್ರೀಲಂಕಾದಲ್ಲಿ- ನೆಲೆಸಿದ್ದ
ಕೆಲವರು ಮಹತ್ವದ ಘಟನೆಗೆ ಸಾಕ್ಷಿಯಾದರು. ರಜೆ ದಿನದ ಸಂಭ್ರಮದಲ್ಲಿದ್ದ ನೂರಾರು ಮಂದಿ ಭೀಕರ ಸುನಾಮಿ ಅಲೆಗಳ ದೃಶ್ಯಗಳನ್ನು ತಮ್ಮ ಹ್ಯಾಂಡಿಕ್ಯಾಮ್‌ನಲ್ಲಿ ಸೆರೆಹಿಡಿದರು. ಅಲ್ಲಿದ್ದವರೆಲ್ಲಾ ದುರದೃಷ್ಟವಶಾತ್ ಒಂದು ಕೆಟ್ಟ ಗಳಿಗೆಯಲ್ಲಿ ಕೆಟ್ಟ ಸ್ಥಳದಲ್ಲಿದ್ದರು. ಆದರೂ ಅವರು ತಮ್ಮ ಕ್ಯಾಮೆರಾ ಎಚ್ಚರವಾಗಿಟ್ಟಿದ್ದರು. ಟಿವಿ ಚಾನೆಲ್‌ನವರು, ವರದಿಗಾರರು ಬರುವ ಹೊತ್ತಿಗೆ ತಡವಾಗಿತ್ತು. ಅವರು ಭೀಕರ ಅಲೆಗಳನ್ನು ಪ್ರತ್ಯಕ್ಷ ಕಂಡು ಸೆರೆಹಿಡಿದವರಿಂದ ಬೇಡಿ ಪಡೆದು ತಮ್ಮ ಟಿವಿಗಳಲ್ಲಿ ಪ್ರಸಾರ ಮಾಡಬೇಕಾಯಿತು. ಈ ಒಂದು ಘಟನೆ ಸಿಟಿಜನ್ ಜರ್ನಲಿಸ್ಟ್ ಮಹತ್ವ ಏನೆಂದು ಸ್ಪಷ್ಟವಾಗಿ ವಿವರಿಸುತ್ತದೆ.

ಸಂವಹನಕ್ಕೆ ತೀವ್ರವಾಗಿ ತುಡಿಯುವ ಪ್ರಭೇದ ನಮ್ಮದು. ಅದೂ ತಾಂತ್ರಿಕವಾಗಿ ಸಾಧ್ಯವಾಗುವುದಾದರೆ ಮತ್ತಷ್ಟು ಬೇಗ ಅದನ್ನು ಸ್ವೀಕರಿಸುತ್ತೇವೆ, ನಮ್ಮದನ್ನಾಗಿಸಿಕೊಳ್ಳುತ್ತೇವೆ. ಆರ್ಥಿಕ, ಕಾನೂನು ಮತ್ತು ರಾಜಕೀಯಗಳಷ್ಟೇ ಇದಕ್ಕೆ ಮಿತಿಗಳಾಗಬಹುದು. ಕಾಲಾನಂತರದಲ್ಲಿ ಅವೂ ಕೂಡ ತೊಡಕಾಗುವುದಿಲ್ಲ. ಆದರೆ ನಮ್ಮ ನೈತಿಕತೆ ಮಾತ್ರ ನಮ್ಮ ಮುಂದೆ ಇದ್ದೇ ಇರುತ್ತದೆ. ಭವಿಷ್ಯದ ಸಂಪೂರ್ಣ ಸಂಪರ್ಕವುಳ್ಳ ಜಗತ್ತನ್ನು ರೂಪಿಸುವುದು ನಮ್ಮ ಕೈಗಳಲ್ಲೇ ಇದೆ ಎನ್ನುವುದನ್ನು ಮಾತ್ರ ಸಿಟಿಜನ್ ಜರ್ನಲಿಸ್ಟ್ ಮರೆಯಬಾರದು.

ನಾವೀಗ ಇರುವುದು ಮಾಧ್ಯಮ ಜಗತ್ತಿನಲ್ಲಿ. ಜಗತ್ತಿನ ಎಲ್ಲ ಪತ್ರಿಕೆಗಳು, ಸುದ್ದಿ ರವಾನಿಸುವ ಅಲೆಗಳು ಸ್ತಬ್ಧವಾಗಿಬಿಟ್ಟರೆ, ನಮ್ಮ ಜಗತ್ತು ಕೂಡ ಸ್ತಬ್ಧ. ಹಾಗಾಗಿ ಸಶಕ್ತ ಸಮಾಜಕ್ಕೆ ಸದಾ ಮಾಹಿತಿ ನೀಡಲು ವಿವಿಧ ರೀತಿಯ ಮಾಧ್ಯಮಗಳು ಬೇಕು. ಅಮೆರಿಕದ ಲೇಖಕ ಎ.ಜೆ. ಲೀಬ್ಲಿಂಗ್ ಹೇಳುತ್ತಾನೆ, ‘ಪತ್ರಿಕಾ ಸ್ವಾತಂತ್ರ್ಯ ಅನ್ನೋದು ಪತ್ರಿಕೆಯನ್ನು ಹೊಂದಿರುವವರದ್ದಾಗಿರುತ್ತದೆ’ ಎಂದು. ಈ ಮಾತಿನಲ್ಲಿ ಅರ್ಥವಿದೆ.

ಇತ್ತೀಚಿನವರೆಗೆ ಇದ್ದ ಪರಿಸ್ಥಿತಿ ಇದು. ಆದರೆ ಅಂತರ್ಜಾಲ ಈಗ ಪ್ರತಿಯೊಬ್ಬರ ಕಂಪ್ಯೂಟರನ್ನು ಒಂದು ಪ್ರಿಂಟಿಂಗ್ ಪ್ರೆಸ್, ಪ್ರಸಾರಕೇಂದ್ರವನ್ನಾಗಿ ಮಾಡಿದೆ. ನಾವೀಗ ಸಂಪರ್ಕ ಮಾಧ್ಯಮದ ಎರಡನೇ ಯುಗಕ್ಕೆ ಕಾಲಿಡುತ್ತಿದ್ದೇವೆ. ಬ್ಲಾಗ್‌ಗಳು, ವಿಕಿಪೀಡಿಯಾ ಮತ್ತು ಸಿಟಿಜನ್ ಜರ್ನಲಿಸ್ಟ್‌ಗಳು ಮುಂಬರುವ ಹೊಸತನದ ಸಂಕೇತಗಳು.

ಬ್ಲಾಗ್ ಬರಹಗಾರರು ಆನ್‌ಲೈನ್‌ನಲ್ಲಿ ತಮ್ಮ ಡೈರಿ ಬರೆಯುವ ಮೂಲಕ ತಮ್ಮ ವೃತ್ತಿ ಮತ್ತು ಸಮಾಜಿಕ ಪರಿಧಿಯಿಂದಾಚೆಗೂ ಪ್ರಭಾವಿಯಾಗಬಲ್ಲರು. ಕೊಲಂಬಿಯಾ ಬಾಹ್ಯಾಕಾಶ ನೌಕೆ ದುರಂತಕ್ಕೀಡಾದಾಗ ಅಸಂಬದ್ಧ ಪತ್ರಿಕಾ ವರದಿಗಳನ್ನು ಖಂಡತುಂಡವಾಗಿ ಟೀಕಿಸಿದ್ದು ಬಾಹ್ಯಾಕಾಶದ ಬಗ್ಗೆ ತಿಳಿದಿದ್ದ ಅನುಭವಿ ಬ್ಲಾಗ್ ಬರಹಗಾರರು ಎನ್ನುವುದನ್ನು ಮರೆಯುವಂತಿಲ್ಲ.

ಸಿಟಿಜನ್ ಜರ್ನಲಿಸಂ ಅನ್ನೋ ಪರಿಕಲ್ಪನೆಯನ್ನು ಶೇನ್ ಬೌಮನ್ ಮತ್ತು ಕ್ರಿಸ್ ವಿಲ್ಲೀಸ್ ಹೀಗೆ ವ್ಯಾಖ್ಯಾನಿಸುತ್ತಾರೆ: ‘ಮಾಹಿತಿ ಸಂಗ್ರಹಿಸುವ, ವರದಿ ಮಾಡುವ, ವಿಶ್ಲೇಷಿಸುವ ಮತ್ತು ಸುದ್ದಿ, ಮಾಹಿತಿಯ ಪ್ರಸಾರದಲ್ಲಿ ಕ್ರಿಯಾಶೀಲ ತೊಡಗುವಿಕೆ’ ಎಂದು.

ಸಿಟಿಜನ್ ಜರ್ನಲಿಸಂ ಉದ್ದೇಶ ಪ್ರಜಾಪ್ರಭುತ್ವ ನಿರೀಕ್ಷಿಸುವಂತೆ ಸ್ವತಂತ್ರ, ವಿಶ್ವಾಸಾರ್ಹ, ನಿಖರ, ಸವಿವರ, ಸಾಂದರ್ಭಿಕ ಮಾಹಿತಿಯನ್ನು ಪೂರೈಸುವುದು. ಇದನ್ನು ನಾವು ಮಾಧ್ಯಮದ ಮುಖ್ಯವಾಹಿನಿಯಿಂದಲೂ ನಿರೀಕ್ಷಿಸುತ್ತೇವೆ. ಸಿಬಿಎಸ್‌ ನ್ಯೂಸ್‌ನಲ್ಲಿ ನಿರೂಪಕನಾಗಿರುವ ವಾಲ್ಟರ್ ಕ್ರಾನ್‌ಕೈಟ್ ಹೇಳುವಂತೆ, ಇತ್ತೀಚಿನ ದಿನಗಳಲ್ಲಿ ಅಮೆರಿಕದ ಮಾಧ್ಯಮ ಒತ್ತಡವನ್ನು ಎದುರಿಸುತ್ತಿದೆ. ಇಂದು ಸಂಪಾದಕೀಯ ಬಳಗದ ಏಕತೆ ಹಾಗೂ ಸ್ವಾತಂತ್ರ್ಯಕ್ಕೆ ಧಕ್ಕೆ ಉಂಟಾಗಿದೆ. ಕಾರ್ಪೋರೇಟ್ ಸೆನ್ಸಾರ್ ಸರ್ಕಾರಿ ಸೆನ್ಸಾರ್ ನಷ್ಟೇ ಅಪಾಯಕಾರಿ. ಹಾಗೆ ಸ್ವಯಂ ಹೇರಿಕೆಯ ಸೆನ್ಸಾರ್ ವಂಚನೆ ಎನ್ನುತ್ತಾನೆ ಮಾಧ್ಯಮ ನಿರೂಪಕ ಕ್ರಾನ್‌ ಕೈಟ್.

ಸಿಟಿಜನ್ ಜರ್ನಲಿಸ್ಟ್‌ಗಳು ಪೂರ್ವಾಗ್ರಹ ಪೀಡಿತರಾಗಿರುವುದಿಲ್ಲ ಎನ್ನುವ ಹಾಗಿಲ್ಲ. ಆದರೆ ಅಸಂಖ್ಯ ಮಂದಿ ಏಕಕಾಲಕ್ಕೆ ಭಾಗಿಯಾಗಿರುವ ವಿಕಿಪೀಡಿಯಾ ಸ್ವಯಂ ತಿದ್ದಿಕೊಳ್ಳುವುದಕ್ಕೆ ಸಾಧ್ಯವಿರುವುದನ್ನು ಸಾಬೀತು ಮಾಡಿದೆ. ಆರಂಭದಲ್ಲಿ ವಿಕಿಪೀಡಿಯಾ "ಆನ್ ಎನ್‌ ಸೈಕ್ಲೋಪಿಡೀಯಾ"ವನ್ನು ಇಂಟರ್ನೆಟ್ ಬಳಕೆದಾರರ ಮಾಹಿತಿಯಿಂದಲೇ ರೂಪಿಸಲಾಯಿತು. ಇದು ಅರೆಸತ್ಯ, ಸುಳ್ಳು ಮಾಹಿತಿಗಳನ್ನು ಹೊಂದಿರುವ ಭಯವಿತ್ತು. ಆದರೆ ಅಧ್ಯಯನಗಳು ಹೇಳುತ್ತವೆ, ಅಂಥ ಯಾವುದೇ ಮಾಹಿತಿಯೂ ಅತಿ ಶೀಘ್ರದಲ್ಲೇ ತಿದ್ದುಪಡಿಯಾಗುತ್ತದೆ ಮತ್ತು ಅಪ್‌-ಡೇಟ್ ಕೂಡ ಆಗುತ್ತದೆ!

ಹಾಗಂತ ಸಿಟಿಜನ್ ಜರ್ನಲಿಸ್ಟ್ ಕಠಿಣವಾದ ಮಾಧ್ಯಮ ಸ್ಪರ್ಧೆಯಲ್ಲಿ ಬದುಕುತ್ತಾನಾ? ಈ ಪ್ರಶ್ನೆಗೆ ಉತ್ತರ ನಮ್ಮಲ್ಲೇ ಇದೆ. ಹೊಸ ಬದಲಾವಣೆ ಮಾಧ್ಯಮದ ಬಳಕೆದಾರನ ಶಕ್ತಿಯನ್ನು ಉಪೇಕ್ಷಿಸುವಂತಿಲ್ಲ.

ಸಿಟಿಜನ್ ಜರ್ನಲಿಸಮ್‌ಗೆ ಇದೊಂದು ಉತ್ತಮ ಉದಾಹರಣೆ: ಕಮರ್ಷಿಯಲ್ ದೃಷ್ಟಿಯಲ್ಲೂ ಯಶಸ್ಸು ಕಂಡ ಮತ್ತು ಉತ್ತಮ ಸಿಟಿಜನ್ ಜರ್ನಲಿಸಂ ಎಂದು ಗುರುತಿಸಿಕೊಂಡಿದ್ದು ದಕ್ಷಿಣ ಕೊರಿಯಾದ www.ohmynews.com; 2001 ರಲ್ಲಿ "ಓಹ್ ಯೊನ್ ಹೊ" ಎಂಬ ಪತ್ರಕರ್ತ ಅಂತರ್ಜಾಲ ಪತ್ರಿಕೆ ಆರಂಭಿಸಿದ. ಪ್ರತಿಯೊಬ್ಬ ಪ್ರಜೆಯೂ ಪತ್ರಕರ್ತ ಎಂಬುದು ಆತನ ನಿಲುವು.

ಹಾಗಾಗಿ ಆತ ಯಾರು ಬೇಕಾದರೂ ವರದಿ ಮಾಡಬಹುದು ಎಂಬ ಆಹ್ವಾನ ಕೊಟ್ಟ. ಇಂದು ಸಾವಿರಾರು ಮಂದಿ ಈ ವೆಬ್‌ಸೈಟಿಗೆ ಸುದ್ದಿ ಬರೆದು ಕಳಿಸುತ್ತಾರೆ. ಪ್ರತಿದಿನ 7.5 ಲಕ್ಷ ಮಂದಿ ಈ ವೆಬ್‌ಸೈಟಿಗೆ ಭೇಟಿಕೊಡುತ್ತಾರೆ. ಈಗ ಓಹ್‌ಮೈನ್ಯೂಸ್ ವೆಬ್‌ಸೈಟಿನಲ್ಲಿ ಕೇವಲ ೪೦ ಮಂದಿ ಸಿಬ್ಬಂದಿ ಇದ್ದು, ಅವರು ಬರೆಯುವ ಸುದ್ದಿ ವೆಬ್‌ಸೈಟಿನಲ್ಲಿ ಪ್ರಕಟವಾದ ಸುದ್ದಿಗಳ ಐದನೇ ಒಂದು ಭಾಗ ಮಾತ್ರ! ಉಳಿದಿದ್ದು ನಾಗರಿಕರು ಕಳಿಸಿದ್ದು.

ದಕ್ಷಿಣ ಕೊರಿಯ ಅಧ್ಯಕ್ಷ ರೊಹ್ ಮೂ ಹ್ಯೂನ್ ಆಯ್ಕೆಯಲ್ಲಿ ಈ ವೆಬ್‌ಸೈಟ್ ಮಹತ್ವದ ಪಾತ್ರ ವಹಿಸಿತ್ತು. ಚುನಾವಣೆ ನಂತರ ಹ್ಯೂನ್ ಮೊದಲು ಸಂದರ್ಶನ ನೀಡಿದ್ದು ಯಾವುದೇ ಪತ್ರಿಕೆಗಲ್ಲ. ಸಿಟಿಜನ್ ಜರ್ನಲಿಸ್ಟ್‌ಗಳಿಂದ ನಡೆಯುತ್ತಿರುವ "ಓಹ್ ಮೈನ್ಯೂಸ್ ವೆಬ್‌ಸೈಟಿಗೆ! ಇದೇ ವ್ಯಕ್ತಿ ಆರೋಪ ಹೊತ್ತು ನಿಂತಾಗ ನಡೆದ ಪ್ರತಿಭಟನೆಗಳನ್ನು ವಿಸ್ತೃತವಾಗಿ, ಸಚಿತ್ರ ಹಾಗೂ ವಿಡಿಯೋಗಳೊಂದಿಗೆ ವರದಿ ಮಾಡಿದ ಹೆಗ್ಗಳಿಕೆ ಸಿಟಿಜನ್ ಜರ್ನಲಿಸ್ಟ್‌ಗಳದ್ದು.

ನಿಷ್ಕ್ರಿಯವಾದ ಮಾಧ್ಯಮದ ಯುಗ ಅಂತ್ಯದತ್ತ ಸಾಗುತ್ತಿದೆ. ಸಿಜಿಟನ್ ಕೇನ್ ನಿಂದ ಸಿಟಿಜನ್ ಜರ್ನಲಿಸ್ಟ್‌ನತ್ತ ಹೊರಟ ಈ ದಾರಿಯಲ್ಲಿ ಹಿಂತಿರುಗುವ ಮಾತಿಲ್ಲ. ಆದ್ದರಿಂದ ಸಿಟಿಜನ್ ಜರ್ನಲಿಸಂ ಹೊಸ ಯುಗದ "ಮಾಧ್ಯಮ ಶಕ್ತಿ" ಎನ್ನುವುದು ನನ್ನ ಅಭಿಪ್ರಾಯ.

ಇಷ್ಟು ಹೇಳಿ ನನ್ನ ಮಾತು ಮುಗಿಸುತ್ತೇನೆ; ನಮಸ್ಕಾರ.